ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಯಾವಾಗ.



 
ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಜುಲೈ 28) ಬೆಳಗ್ಗೆ 11 ಗಂಟೆಗೆ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇಂದು (ಜುಲೈ 27) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವೀಕ್ಷಕರು, ಕರ್ನಾಟಕ ಬಿಜೆಪಿ ಉಸ್ತುವಾರಿ ಹಾಗೂ ಬಿಜೆಪಿ ಶಾಸಕರ ಸಮ್ಮುಖದಲ್ಲಿ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ.ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಿಂದ ಹಕ್ಕು ಮಂಡನೆ ಮಾಡಲಾಗಿದೆ. ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್​ಗೆ ಮನವಿ ಮಾಡಲಾಗಿದೆ. ಸರ್ಕಾರ ರಚನೆಗೆ ರಾಜ್ಯಪಾಲ ಗೆಹಲೋತ್ ಒಪ್ಪಿಗೆ ನೀಡಿದ್ದಾರೆ. ಉಸ್ತುವಾರಿ ಸಿಎಂ ಬಿಎಸ್‌ವೈ ಹಾಗೂ ಇತರ ಕೆಲವು ನಾಯಕರು ಉಪಸ್ಥಿತರಿದ್ದರು.

No comments:

Post a Comment